ಎದ್ದು ಹೊರಟು ಹೋದ ಅವನು
ಮತ್ತೆ ಬರಲಾಗದ ಕಡೆಗೆ ಹೇಳದೆ\\
ಕಣ್ಣುಗಳು ಹೊಳೆಯುತ್ತಿದ್ದವು ನಕ್ಷತ್ರದಂತೆ
ತಿಮಿರಾಂಡವ ಕಳೆದ ರವಿತೇಜದಂತೆ\
ಬಂದ ಮಾನವೀಯ ಸೇವಕನಾಗಿ ಸೇವೆಗೈದ
ಕೆಲಸ ಮುಗಿದ ಮೇಲೆ ಹೇಳದೆ ಮರೆಯಾದ\\
ತಾನು ಬಂದ ಕೆಲಸ ಮುಗಿಯಿತೆಂದು
ಭುವಿಯ ಋಣವ ತೀರಿಸಿ ನಿಂದು\
ಹಾಡುತ್ತಾ ಪಾಡುತ್ತಾ ನಗುನಗುತ್ತಾ ಬಂದು
ಏಕಾಗ್ರಚಿತ್ತದಿಂದ ಬಸವಳಿದು ಬೆಂದು\\
ನಿಂದನೆ ಹೊಗಳಿಕೆ ಸಮಭಾವದಿ ಕಂಡು
ನೋವು ನಲಿವುಗಳ ಸಮರಸದ ಭಾವಕೆ\
ಜೀವನದ ಪಲ್ಲವಿಯ ರಾಗಕೆ ಮುನ್ನುಡಿ ಬರೆದು
ಸಾಗುತ ಸಾಗುತ ನೆಗೆದ ಆಕಾಶಕೆ\\
Tuesday, June 22, 2010
Subscribe to:
Post Comments (Atom)
ಕಡಲೇ.....
ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ರವಿ ಜಾರಿದ ಕೆಲಸವಾಯ್ತೆಂದು ಲೋಕರೂಡಿ ಹಕ್ಕಿಗಳು ಗೂಡು ಸೇರಿದವು ಕತ್ತಲಾವರಿಸಿ,ನೀರವತೆ ಪಸರಿಸಿ ಪ್ರೇಮ ಹೃದಯಗಳಲ್ಲಿ ಪ್ರಣಯದ ಕಿಚ್ಚು ಹೊತ್ತಿಸಿ..... ಹೊನ್ನ ಚಂದ್ರಿಕೆಗ...
No comments:
Post a Comment