Wednesday, October 27, 2010

-ನಂಬಿಕೆ-

ಮನಸೇ ಹೊರಡು ಇಲ್ಲಿಂದ
ಬಿಡು ಊಟ, ನಿದ್ದೆ ಈಗಲೇ
ಗುಂಡಿನ ಶಬ್ದ ಕೇಳಿಸುತ್ತಿರುವುದೇ
ಗಡಿಯಾಚೆಯಿಂದ ಶತ್ರುಗಳ ಅಟ್ಟಹಾಸ


ಹೊರಡು ಅಲ್ಲಿ ಗೆಳೆಯನೋರ್ವ
ನಿನಗಾಗಿ ಕಾಯುತಿಹನು ಪ್ರಾಣವ ಕೈಯಲ್ಲಿ ಹಿಡಿದು
ಅವನ ನಂಬಿಕೆಯನ್ನು ಸುಳ್ಳಾಗಿಸಬೇಡ
ಅವನು ಕಣ್ಣುಮುಚ್ಚುವ ಮುನ್ನ ಸಾಗು ಅವನೆಡೆಗೆ


ಗುಂಡು ಎದೆಗೆ ಬಡಿದರೂ
ಎದೆಗುಂಧದೆ ಸಾಗು ಮುಂದೆ
ಹಾಂ! ಅಲ್ಲಿ ಬಿದ್ದಿರುವನು ನನ್ನ ಗೆಳೆಯ
ನರಳುತ್ತಾ ಎದೆಯ ಹಿಡಿದುಕೊಂಡು


ಒಂದು ಕೈಯಲ್ಲಿ ಭಗವದ್ಗೀತೆ
ತುಟಿಯಲ್ಲಿ ನನ್ನದೆ ಧ್ಯಾನ
ರಕ್ತತಿಲಕ ಹಣೆಯಲಿ, ಮೈಯಲ್ಲಾ ರಕ್ತ
ನಡೆದಿದೆ ಕೊನೆಯ ಪಯಣದ ಮೆರವಣಿಗೆ


ನನ್ನ ಕಂಡೊಡನೆ ಅವನಲ್ಲಿ ಚೈತನ್ಯ
ತುಟಿಯಲ್ಲಿ ನೋವಿನ ನಗು
ಕಣ್ಣಲ್ಲಿ ಆನಂದ ಭಾಷ್ಪ
ಅವನು ಹೇಳಿದ ಕೊನೆಯ ಮಾತು

ಅವನು ಹೇಳಿದ ಕೊನೆಯ ಮಾತು
"ಗೆಳೆಯ ನನಗೆ ಗೊತ್ತಿತ್ತು ನೀನು
ನನಗಾಗಿ ಬಂದೇ ಬರುವೆಯೆಂದು"
ಅವನ ನಂಬಿಕೆಯನ್ನು ನಾನು ಉಳಿಸಿದ್ದೆ


ಅವನ ನಂಬಿಕೆ ನಾನು ಉಳಿಸಿದ್ದೆ
ಅವನನ್ನು ನಾನು ಕಳೆದುಕೊಂಡಿದ್ದೆ
ನನ್ನ ಮೇಲಿನ ಪ್ರೀತಿ, ಅವನ ಮೇಲಿನ ಪ್ರೀತಿ
ನಂಬಿಕೆಯೊಂದು ಗಟ್ಟಿಗೊಳಿಸಿತ್ತು

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...