ಹಣತೆಯೊಂದು ಬೆಳಕ ಚೆಲ್ಲಿ
ಎಷ್ಟು ಕತ್ತಲ ನುಂಗುವುದೋ?
ಅದರ ಪರಿಧಿಯ ನಾ ಬಲ್ಲೆ
ಬೆಳಕ ಕಾಣದೆ ಎಷ್ಟು ಜೀವಗಳು ನರಳುತಿಹುದೋ?
ಮನದ ಪರಿಧಿಯ ನೀನೊಬ್ಬನೇ ಬಲ್ಲೆ
ರವಿಯ ಕಣ್ಣು ಭೂಮಿಯ ಕಡೆಗೆ
ಜೀವ ಕೋಟಿಗದುವೆ ಕಾರಣ ಏಳಿಗೆಗೆ
ಹೂವು ಹೊರಳುವುವು ಸೂರ್ಯನ ಕಡೆಗೆ
ನಮ್ಮ ಯೋಚನೆ ಬರಿಯ ಹೊಟ್ಟೆಯ ಬಗೆಗೆ
ಮನದ ದೀಪ ಹಚ್ಚಲೊಲ್ಲರು
ಬದುಕಿನ ಭೇಗುದಿಗೆ ನರಳುತಿಹರು
ಕೋಟಿಗೊಬ್ಬನೇ ಸಂಭವಿಸುವನು
ಜನರ ಮನದಲಿ ಅರಿವಿನ ಹಣತೆಯ ಹಚ್ಚುವನು
ಎಷ್ಟು ಯುಗಗಳು ಕಾಯಬೇಕೋ?
ಎಷ್ಟು ಜೀವಗಳು ನರಕಯಾತನೆ ಅನುಭವಿಸಬೇಕೋ?
ಮನದ ಅಂತಃಚಕ್ಷುವ ಎಚ್ಚರಗೊಳಿಸದ ಬೆಳಕು
ನೂರು ಇದ್ದರೇನು? ಇಲ್ಲದಿದ್ದರೇನು?
Subscribe to:
Post Comments (Atom)
ನನ್ನ ಭರವಸೆ
ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಇಂದೇಕೆ ಹೂವೇ ನಿನ್ನ ನಗುವು ಉಮ್ಮಳಿಸಿದೆ ರಾಮ ಬರುವೆನೆಂದೇ? ರಾಮ ಬರುವೆನೆಂದೇ? ಗಾಳಿಯಲಿಂದೇಕೆ ಸುಗಂಧ ಪಸರಿಸಿದೆ ಹೆಚ್ಚಾಗಿ ರಾಮ ಬರುವೆನೆಂದೇ? ರಾಮ ಬರುವೆನೆಂದೇ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
No comments:
Post a Comment