ತಿಳಿನೀಲಿ ಆಕಾಶದಲ್ಲಿ
ಹಾಲು ಚೆಲ್ಲಿದ ಹೊಂಬೆಳಕಲ್ಲಿ
ತಾರೆಯರ ಒಡನಾಟದಲ್ಲಿ
ಚಂದ್ರಮುಖಿ ಪಯಣಿಸುತಿಹಳು
ಕರ್ತವ್ಯದ ಕರೆಗೆ ಓಗೊಟ್ಟು
ಸಪ್ತ ಹಯವೇರಿ
ಬಾನಿನಂಗಳಕ್ಕೆ ಲಗ್ಗೆ ಇಟ್ಟನು
ಆರ್ಯ ಕುಮಾರ
ವಜ್ರ ಕಿರೀಟಗಳಿಂದ ಭೂಷಿತನಾದ
ಆರ್ಯ ಕುಮಾರನ ಸೌಂದರ್ಯವ
ಕಂಡು ನಾಚಿ ನೀರಾದಳು ಚಂದ್ರಮುಖಿ
ಚಂದ್ರಮುಖಿಯಲಿ ಪೇಮಾಂಕುರಿಸೆ
ನಾಲಗೆಗೆ ಮಾತುಗಳು ಎಟುಕದೆ
ನಾಚಿಕೆಯಿಂದ ಕೆನ್ನೆ ಕೆಂಪೇರಿದವು
ತಿಳಿದಾ ಗಗನವು ತಾನೇ ಆರ್ಯ ಕುಮಾರನಿಗೆ
ಮನ ಸೋತಂತೆ ನಾಚಿ
ಬಾನೆಲ್ಲಾ ಕೆಂಪಾಗಿಸಿದನು
Subscribe to:
Post Comments (Atom)
ನನ್ನ ಭರವಸೆ
ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಇಂದೇಕೆ ಹೂವೇ ನಿನ್ನ ನಗುವು ಉಮ್ಮಳಿಸಿದೆ ರಾಮ ಬರುವೆನೆಂದೇ? ರಾಮ ಬರುವೆನೆಂದೇ? ಗಾಳಿಯಲಿಂದೇಕೆ ಸುಗಂಧ ಪಸರಿಸಿದೆ ಹೆಚ್ಚಾಗಿ ರಾಮ ಬರುವೆನೆಂದೇ? ರಾಮ ಬರುವೆನೆಂದೇ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
No comments:
Post a Comment