Thursday, November 11, 2010

ಆರ್ಯ-ಚಂದ್ರಮುಖಿ

ತಿಳಿನೀಲಿ ಆಕಾಶದಲ್ಲಿ
ಹಾಲು ಚೆಲ್ಲಿದ ಹೊಂಬೆಳಕಲ್ಲಿ
ತಾರೆಯರ ಒಡನಾಟದಲ್ಲಿ
ಚಂದ್ರಮುಖಿ ಪಯಣಿಸುತಿಹಳು

ಕರ್ತವ್ಯದ ಕರೆಗೆ ಓಗೊಟ್ಟು
ಸಪ್ತ ಹಯವೇರಿ
ಬಾನಿನಂಗಳಕ್ಕೆ ಲಗ್ಗೆ ಇಟ್ಟನು
ಆರ್ಯ ಕುಮಾರ

ವಜ್ರ ಕಿರೀಟಗಳಿಂದ ಭೂಷಿತನಾದ
ಆರ್ಯ ಕುಮಾರನ ಸೌಂದರ್ಯವ
ಕಂಡು ನಾಚಿ ನೀರಾದಳು ಚಂದ್ರಮುಖಿ

ಚಂದ್ರಮುಖಿಯಲಿ ಪೇಮಾಂಕುರಿಸೆ
ನಾಲಗೆಗೆ ಮಾತುಗಳು ಎಟುಕದೆ
ನಾಚಿಕೆಯಿಂದ ಕೆನ್ನೆ ಕೆಂಪೇರಿದವು

ತಿಳಿದಾ ಗಗನವು ತಾನೇ ಆರ್ಯ ಕುಮಾರನಿಗೆ
ಮನ ಸೋತಂತೆ ನಾಚಿ
ಬಾನೆಲ್ಲಾ ಕೆಂಪಾಗಿಸಿದನು

No comments:

Post a Comment

ಅವಳೇ ಶಕ್ತಿ, ಅವಳೇ ಪ್ರಪಂಚ

 ಧೈರ್ಯದ ನಡೆ,  ಪ್ರಶಾಂತ ಧ್ವನಿ. ಕನಸೇ ಕಂಗಳು, ಅಭಯವೇ ರಕ್ಷಣೆ. ಬಿರುಗಾಳಿಯೂ ಅವಳೇ, ಬೆಂಕಿಯ ಕೆನ್ನಾಲಿಗೆಯೂ ಅವಳೇ. ಶಾಂತ ಸಮುದ್ರವೂ ಅವಳೇ, ಕರುಣೆಯ ಕಡಲೂ ಅವಳೇ. ನಮ್ಮ...