||ಯುಗಾದಿ||
ಜನಮನದಲೀ ಯುಗಾದಿ
ಯುಗಾದಿ ಆದಿಯಾದರೂ ಅಂತ್ಯದ ಸುಳಿವಿಲ್ಲ
ಅಂತ್ಯವಿಲ್ಲದಾತನ ಅನಂತ ಕ್ರೀಡೆಯ ನೋಡೋ ಮನುಜ
ಜಗದೊಡೆಯನ ಚದುರಂಗದಾಟದ ಬೊಂಬೆಗಳು ನಾವು
ಗೆಲ್ಲುವವರು ಯಾರೋ?
ಸೋಲುವವರು ಯಾರೋ?
ಸೋಲರಿಯದವನ ಕೈಚಳಕವನು ಬಲ್ಲವನು ನಾನಲ್ಲ!
ಸೋಲೋ.......?
ಗೆಲುವೋ.....?
ಅನುಭವಿಸುವವನು ನಾನೇ.......
ಹೋಳೀ ಹಬ್ಬದ ಓಕುಳಿಯ ಚೆಲ್ಲಿದಂತೆ
ಗಿಡ ಮರಗಳಲಿ ಬಣ್ಣವನ್ನೇ ಚೆಲ್ಲಿದನು.
ಬಿಸಿಲ ದಗೆಯಲೀ ಆದಿ!
ಯಾವ ಯುಗವೋ ಏನೋ?
ಅರಿವೆಂಬ ಅರಿವೆ ಇಲ್ಲದವನು ನಾನು
ಅರಿತವನು ನೀನು
ತಿಳಿಯ ಹೇಳೋ ಅರಿತಜ್ಜ.......
ಧಗೆಯಲ್ಲಿ ಯುಗದ ಆದಿ!
ಎಷ್ಟು ಸಮಂಜಸವೋ ಏನೋ?
ಅರಿತಜ್ಜನ ಕಾರ್ಯವೈಖರಿಯ ಬಲ್ಲವನು ನಾನಲ್ಲ
ಹೀಗೆಳೆಯುವ ಮನಸ್ಸಿನವನು ಅಲ್ಲ
ಆಗಿ ಹೋಗುದುದಕ್ಕೆ ಚಿಂತಿಸಿ ಫಲವೇನು?
ಸೃಷ್ಟಿಯ ಸಮಷ್ಟಿಯ ವೈಚಿತ್ರ್ಯವೀ ಯುಗಾದಿ......
Subscribe to:
Post Comments (Atom)
ನನ್ನ ಭರವಸೆ
ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಇಂದೇಕೆ ಹೂವೇ ನಿನ್ನ ನಗುವು ಉಮ್ಮಳಿಸಿದೆ ರಾಮ ಬರುವೆನೆಂದೇ? ರಾಮ ಬರುವೆನೆಂದೇ? ಗಾಳಿಯಲಿಂದೇಕೆ ಸುಗಂಧ ಪಸರಿಸಿದೆ ಹೆಚ್ಚಾಗಿ ರಾಮ ಬರುವೆನೆಂದೇ? ರಾಮ ಬರುವೆನೆಂದೇ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
ಕವನ ಸುಂದರವಾಗಿದೆ. ಧನ್ಯವಾದಗಳು
ReplyDeleteಮಹೇಶ ಭಟ್ಟ ರವರೇ ನಿಮ್ಮ ಅಭಿಪ್ರಾಯಕ್ಕೆ ಧನ್ಯವಾದಗಳು.
ReplyDelete