Thursday, November 11, 2010

||ಯುಗಾದಿ||


ಜನಮನದಲೀ ಯುಗಾದಿ
ಯುಗಾದಿ ಆದಿಯಾದರೂ ಅಂತ್ಯದ ಸುಳಿವಿಲ್ಲ
ಅಂತ್ಯವಿಲ್ಲದಾತನ ಅನಂತ ಕ್ರೀಡೆಯ ನೋಡೋ ಮನುಜ


ಜಗದೊಡೆಯನ ಚದುರಂಗದಾಟದ ಬೊಂಬೆಗಳು ನಾವು
ಗೆಲ್ಲುವವರು ಯಾರೋ?
ಸೋಲುವವರು ಯಾರೋ?
ಸೋಲರಿಯದವನ ಕೈಚಳಕವನು ಬಲ್ಲವನು ನಾನಲ್ಲ!
ಸೋಲೋ.......?
ಗೆಲುವೋ.....?
ಅನುಭವಿಸುವವನು ನಾನೇ.......
ಹೋಳೀ ಹಬ್ಬದ ಓಕುಳಿಯ ಚೆಲ್ಲಿದಂತೆ
ಗಿಡ ಮರಗಳಲಿ ಬಣ್ಣವನ್ನೇ ಚೆಲ್ಲಿದನು.
ಬಿಸಿಲ ದಗೆಯಲೀ ಆದಿ!
ಯಾವ ಯುಗವೋ ಏನೋ?
ಅರಿವೆಂಬ ಅರಿವೆ ಇಲ್ಲದವನು ನಾನು
ಅರಿತವನು ನೀನು
ತಿಳಿಯ ಹೇಳೋ ಅರಿತಜ್ಜ.......

ಧಗೆಯಲ್ಲಿ ಯುಗದ ಆದಿ!
ಎಷ್ಟು ಸಮಂಜಸವೋ ಏನೋ?
ಅರಿತಜ್ಜನ ಕಾರ್ಯವೈಖರಿಯ ಬಲ್ಲವನು ನಾನಲ್ಲ
ಹೀಗೆಳೆಯುವ ಮನಸ್ಸಿನವನು ಅಲ್ಲ
ಆಗಿ ಹೋಗುದುದಕ್ಕೆ ಚಿಂತಿಸಿ ಫಲವೇನು?
ಸೃಷ್ಟಿಯ ಸಮಷ್ಟಿಯ ವೈಚಿತ್ರ್ಯವೀ ಯುಗಾದಿ......

2 comments:

  1. ಕವನ ಸುಂದರವಾಗಿದೆ. ಧನ್ಯವಾದಗಳು

    ReplyDelete
  2. ಮಹೇಶ ಭಟ್ಟ ರವರೇ ನಿಮ್ಮ ಅಭಿಪ್ರಾಯಕ್ಕೆ ಧನ್ಯವಾದಗಳು.

    ReplyDelete

ಅಣುವಿನಿಂದ ಅನಂತದವರೆಗೆ

ಅದೇನೋ ನಾ ತಿಳಿಯೇ ! ಕಡಲ ಸೇರುವಾಗ ಹೃದಯ ಭಯದಿಂದ ಚಡಪಡಿಸುವುದು ! ನಾನು ಹರಿದು ಬಂದ ದಾರಿಯ ಹಿಂತಿರುಗಿ ನೋಡುವೆ , ಪರ್ವತಗಳ ಶಿಖರದ ತುದಿಯಿಂದ ಮೊದ...