Monday, December 6, 2010

ಮೌನಕ್ಕೆ ಶರಣು

ಏಕೆ ಮೌನಕ್ಕೆ ಶರಣಾಗಿರುವೆ ರಾಧೇ?
ಬೃಂದಾವನವೆಲ್ಲಾ ಶೋಕದಲ್ಲಿ ನರಳಿದೆ
ನಿನ್ನ ಮೌನ ಕಂಡು\\

ಚೈತನ್ಯದ ಚೆಲುವು ನೀನು
ಪುಷ್ಫಗಳ ಸುಗಂಧವು ನೀನು
ತಂಗಾಳಿಯ ತಂಪು ನೀನು
ಇಂದೇಕೆ ಚೈತನ್ಯ ಮರೆಯಾಗಿದೆ ಹೇಳು ನೀನು\\

ನಮ್ಮೆಲ್ಲರ ಸಖಿಯು ನೀನು
ಬೃಂದಾವನದ ಚೆಲುವು ನೀನು
ಶ್ಯಾಮನ ಪ್ರಾಣವು ನೀನು
ಇಂದೇಕೆ ಮೌನಕ್ಕೆ ಮನಸೋತೆ ಹೇಳು ನೀನು\\

ಹೇಳು ಮನದ ನೋವನು
ನಿನ್ನ ನೋವು ನಮ್ಮದೇ ಹೇಳು ನೀನು
ಶ್ಯಾಮನಿಲ್ಲ ಬೃಂದಾವದಲ್ಲಿ ತಿಳಿದೆವು ನಾವು
ಬಂದ ಭಾಗ್ಯವು ಕೆಲಸ ಮುಗಿಸಿ ಹೊರಟು ಹೋಯಿತು\\

ಸಮಾಧಾನವಿರಲಿ ಗೆಳತಿ
ಮಧುರ ನೆನಪುಗಳ ಅವ ಬಿಟ್ಟು ಹೋದನಲ್ಲಾ
ಹೇಳದೇ ಬಂದ ಮಧುರ ನೋವು ಹೇಳದೇ ಹೋಯಿತಷ್ಟೆ
ಶ್ಯಾಮ ನಮ್ಮೊಡನಿದ್ದನೆಂಬುದೇ ನಮಗೆಲ್ಲಾ ಹರುಷವಷ್ಟೇ ಗೆಳತಿ\\

ಜೀವನದ ಪಾಠ ಕಲಿಸಿದ ಗುರು ಅವನು
ನಮ್ಮ ತಪ್ಪು-ಒಪ್ಪುಗಳನ್ನೆಲ್ಲಾ ತಿದ್ದಿ ತೀಡಿದ ಗೆಳೆಯ ಅವನು
ಆತ್ಮದ ಕಣ್ಣು ತೆರೆಸಿದ ಸ್ವಾಮಿ ಅವನು
ಜೀವನದಲ್ಲಿ ಇದ್ದರೂ ಇಲ್ಲದಂತೆ ಇರುವುದ ಕಲಿಸಿ ಮೋಹವ ತೊಳೆದ ಮನ ಮೋಹನ ಅವನು\\

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...