ಏಕೆ ಮೌನಕ್ಕೆ ಶರಣಾಗಿರುವೆ ರಾಧೇ?
ಬೃಂದಾವನವೆಲ್ಲಾ ಶೋಕದಲ್ಲಿ ನರಳಿದೆ
ನಿನ್ನ ಮೌನ ಕಂಡು\\
ಚೈತನ್ಯದ ಚೆಲುವು ನೀನು
ಪುಷ್ಫಗಳ ಸುಗಂಧವು ನೀನು
ತಂಗಾಳಿಯ ತಂಪು ನೀನು
ಇಂದೇಕೆ ಚೈತನ್ಯ ಮರೆಯಾಗಿದೆ ಹೇಳು ನೀನು\\
ನಮ್ಮೆಲ್ಲರ ಸಖಿಯು ನೀನು
ಬೃಂದಾವನದ ಚೆಲುವು ನೀನು
ಶ್ಯಾಮನ ಪ್ರಾಣವು ನೀನು
ಇಂದೇಕೆ ಮೌನಕ್ಕೆ ಮನಸೋತೆ ಹೇಳು ನೀನು\\
ಹೇಳು ಮನದ ನೋವನು
ನಿನ್ನ ನೋವು ನಮ್ಮದೇ ಹೇಳು ನೀನು
ಶ್ಯಾಮನಿಲ್ಲ ಬೃಂದಾವದಲ್ಲಿ ತಿಳಿದೆವು ನಾವು
ಬಂದ ಭಾಗ್ಯವು ಕೆಲಸ ಮುಗಿಸಿ ಹೊರಟು ಹೋಯಿತು\\
ಸಮಾಧಾನವಿರಲಿ ಗೆಳತಿ
ಮಧುರ ನೆನಪುಗಳ ಅವ ಬಿಟ್ಟು ಹೋದನಲ್ಲಾ
ಹೇಳದೇ ಬಂದ ಮಧುರ ನೋವು ಹೇಳದೇ ಹೋಯಿತಷ್ಟೆ
ಶ್ಯಾಮ ನಮ್ಮೊಡನಿದ್ದನೆಂಬುದೇ ನಮಗೆಲ್ಲಾ ಹರುಷವಷ್ಟೇ ಗೆಳತಿ\\
ಜೀವನದ ಪಾಠ ಕಲಿಸಿದ ಗುರು ಅವನು
ನಮ್ಮ ತಪ್ಪು-ಒಪ್ಪುಗಳನ್ನೆಲ್ಲಾ ತಿದ್ದಿ ತೀಡಿದ ಗೆಳೆಯ ಅವನು
ಆತ್ಮದ ಕಣ್ಣು ತೆರೆಸಿದ ಸ್ವಾಮಿ ಅವನು
ಜೀವನದಲ್ಲಿ ಇದ್ದರೂ ಇಲ್ಲದಂತೆ ಇರುವುದ ಕಲಿಸಿ ಮೋಹವ ತೊಳೆದ ಮನ ಮೋಹನ ಅವನು\\
Monday, December 6, 2010
Subscribe to:
Post Comments (Atom)
ಕಡಲೇ.....
ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ರವಿ ಜಾರಿದ ಕೆಲಸವಾಯ್ತೆಂದು ಲೋಕರೂಡಿ ಹಕ್ಕಿಗಳು ಗೂಡು ಸೇರಿದವು ಕತ್ತಲಾವರಿಸಿ,ನೀರವತೆ ಪಸರಿಸಿ ಪ್ರೇಮ ಹೃದಯಗಳಲ್ಲಿ ಪ್ರಣಯದ ಕಿಚ್ಚು ಹೊತ್ತಿಸಿ..... ಹೊನ್ನ ಚಂದ್ರಿಕೆಗ...
No comments:
Post a Comment