Monday, December 13, 2010

||ಗುರು||

ಲೋಕದೊಳು ಬಹುಮಂದಿ
ಜೀವನದಲಿ ಬೆಂದು
ಹದವಾಗಿ ಬೆಳೆದು
ಮಿತವಾಗಿ ಮಣಿದು
ಶ್ರೀವಾಣಿ ಸಂಗದಲಿ ಬಲುಬಂಧಿ

ನಿತ್ಯವೂ ಸಾಧನೆಯ ತಪವು
ಚೈತನ್ಯದ ಒಲವು
ಬರಲೆಮಗೆ ಎದುರಿಸುವ ಬಲವು
ಸಾಧಿಸುವ ಛಲವು
ದಾರಿತೋರು ಜಗದೊಳಗೆ ಪರಮ ಗುರುವೇ

ಬಾಳಿನಲಿ ಜ್ಜಾನ ಜ್ಯೋತಿಯ ಹಚ್ಚಿ
ಯೋಗ ಜ್ಜಾನದ ರೆಕ್ಕೆಯ ಬಿಚ್ಚಿ
ಕನಿಕರಿಸು ಕಾರುಣ್ಯವಾ ಚುಚ್ಚಿ
ಕ್ರಾಂತಿಯ ಕಹಳೆಯ ಊದು ಬಾ ಸಚ್ಚಿ-
ದಾನಂದ ಸ್ವರೂಪನೇ ಎಚ್ಚ-
ರಿಸು ಬಾ ಪರಮ ಗುರುವೇ

ಹುಟ್ಟಿದಾ ಜೀವ
ಎತ್ತ ಹೋಗದು ಇಲ್ಲಿ
ಬೆಳೆಬೆಳೆದು ಏರುವುದು ದಿಗಂತಕ್ಕೆ
ನಿಮ್ಮ ಯೋಗದಾ ಫಲವ
ಜೀವದಾ ಮೇಲಿಟ್ಟು ಹರಸಿ
ಜೀವನವ ಉದ್ಧರಿಸೋ ಪರಮಗುರುವೇ

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...