|| ದಾರಿ ದೀಪವಾಗು ಬದುಕಿಗೆ ||

ನಿನ್ನ ನೋಡದ ಕಣ್ಣು ಏಕೆ ಕೃಷ್ಣಾ
ಬಾ ಬಾಳಿಗೆ ಚೈತನ್ಯವಾಗು ಕೃಷ್ಣಾ\\

ನನ್ನ ಕಣ್ಣಿನ ಬೆಳಕು ನೀನು;
ನನ್ನ ಜೀವನದ ಗುರಿಯು ನೀನು;
ನಿನ್ನ ನೋಡದೆ ನೊಂದಿಹೆನು ಕೊರಗಿ ಕೊರಗಿ
ಚೈತನ್ಯವಿಲ್ಲದೆ ಕಳೆಗುಂದಿದೆ ಬಾಳು ಕೊರಗಿ\\

ನಿದ್ದೆ ಬಾರದು,ಅನ್ನ ಸೇರದು;
ಮನ ಬಯಸಿದೆ ಕೃಷ್ಣ...ಕೃಷ್ಣಾ ಎಂದು;
ಯಾರಿಲ್ಲ ಇಲ್ಲಿ ನನ್ನ ಸಂತೈಸುವವರು
ಒರೆಸುವವರೂ ಇಲ್ಲ ಇಲ್ಲಿ ನನ್ನ ಬೆವರು\\

ಒಳಗಿರುವ ಆತ್ಮಶಕ್ತಿಯೇ ನೀನು;
ಹೊರಬಂದು ನನ್ನ ಸಂತೈಸು ನೀನು;
ದಾರಿ ತೋರು ಈ ಬದುಕಿಗೆ
ದಾರಿ ದೀಪವಾಗು ಬಾ ನನ್ನ ಬದುಕ ಹಾದಿಗೆ\\

No comments:

Post a Comment

ನನ್ನ ಭರವಸೆ

  ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...