ಲೋಕದೊಳು ಬಹುಮಂದಿ
ಜೀವನದಲಿ ಬೆಂದು
ಹದವಾಗಿ ಬೆಳೆದು
ಮಿತವಾಗಿ ಮಣಿದು
ಶ್ರೀವಾಣಿ ಸಂಗದಲಿ ಬಲುಬಂಧಿ
ನಿತ್ಯವೂ ಸಾಧನೆಯ ತಪವು
ಚೈತನ್ಯದ ಒಲವು
ಬರಲೆಮಗೆ ಎದುರಿಸುವ ಬಲವು
ಸಾಧಿಸುವ ಛಲವು
ದಾರಿತೋರು ಜಗದೊಳಗೆ ಪರಮ ಗುರುವೇ
ಬಾಳಿನಲಿ ಜ್ಜಾನ ಜ್ಯೋತಿಯ ಹಚ್ಚಿ
ಯೋಗ ಜ್ಜಾನದ ರೆಕ್ಕೆಯ ಬಿಚ್ಚಿ
ಕನಿಕರಿಸು ಕಾರುಣ್ಯವಾ ಚುಚ್ಚಿ
ಕ್ರಾಂತಿಯ ಕಹಳೆಯ ಊದು ಬಾ ಸಚ್ಚಿ-
ದಾನಂದ ಸ್ವರೂಪನೇ ಎಚ್ಚ-
ರಿಸು ಬಾ ಪರಮ ಗುರುವೇ
ಹುಟ್ಟಿದಾ ಜೀವ
ಎತ್ತ ಹೋಗದು ಇಲ್ಲಿ
ಬೆಳೆಬೆಳೆದು ಏರುವುದು ದಿಗಂತಕ್ಕೆ
ನಿಮ್ಮ ಯೋಗದಾ ಫಲವ
ಜೀವದಾ ಮೇಲಿಟ್ಟು ಹರಸಿ
ಜೀವನವ ಉದ್ಧರಿಸೋ ಪರಮಗುರುವೇ
Friday, January 21, 2011
Subscribe to:
Post Comments (Atom)
ಅಣುವಿನಿಂದ ಅನಂತದವರೆಗೆ
ಅದೇನೋ ನಾ ತಿಳಿಯೇ ! ಕಡಲ ಸೇರುವಾಗ ಹೃದಯ ಭಯದಿಂದ ಚಡಪಡಿಸುವುದು ! ನಾನು ಹರಿದು ಬಂದ ದಾರಿಯ ಹಿಂತಿರುಗಿ ನೋಡುವೆ , ಪರ್ವತಗಳ ಶಿಖರದ ತುದಿಯಿಂದ ಮೊದ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಎತ್ತ ಸಾಗಿದೆ ನಮ್ಮ ಪಯಣ? ಗುರಿ ಇದ್ದೇ ಸಾಗುವ ಪಯಣ ಕಠಿಣ ಗುರಿ ಇರದ ಪಯಣ ಪ್ರಾಣಿಗಳ ಜೀವನ ಗುರಿ,ಸಾಧನೆ ಎಲ್ಲರಿಗೂ ಸಾಧ್ಯ ಮನಸ್ಸಿದ್ದರೆ!
No comments:
Post a Comment