Tuesday, February 22, 2011

ಸೋತ ಮನ

ಮನಸ್ಸು ತುಂಬಾ ನೊಂದಿದೆ
ದಾರಿ ಕಾಣದೆ ಚಡಪಡಿಸಿದೆ
ಕಾಣದ ಗುರಿಯತ್ತ ಕೈ ಚಾಚಿದೆ
ನಿಂತ ನೆಲದಲ್ಲಿ ನಿಲ್ಲಲಾಗದೆ ಬಸವಳಿದಿದೆ
ಸಮಾಧಾನದ ಮಾತಿನ ಅವಶ್ಯಕತೆಯಿದೆ
ಹೃದಯದಲ್ಲಿ,ಮನದಲ್ಲಿ ಚೈತನ್ಯ ತುಂಬುವ ಶಕ್ತಿ ಬೇಕಾಗಿದೆ
ಶಕ್ತಿ ಬತ್ತುವ ಮುನ್ನ
ಓ ಆಶಾಕಿರಣವೇ ಮನದಲ್ಲಿ ಬಾ....
ಅವಕಾಶದ ಹೆದ್ದಾರಿಯೇ ತೆರೆದುಕೋ ಬಾ...
ನನ್ನಲ್ಲಿ ಹೊಸ ಚೈತನ್ಯ ತುಂಬು ಬಾ...
ಬೇಗ ಬಾ ತಡಮಾಡದೆ....

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...