Tuesday, October 18, 2011

ಸೆರೆವಾಸ

ಕಡೆಗೂ ಹೊರಟರು ಒಬ್ಬೊಬ್ಬರಾಗಿ
ಸೆರೆಮನೆ ಕಡೆಗೆ ಲಜ್ಜೆ ಬಿಟ್ಟು
ಕೆಲವರಿಗೆ ಸಂತೋಷ, ದುಗುಡ
ಮತ್ತೆ ಕೆಲವರಿಗೆ ಚಿಂತೆ
ಬಚ್ಚಿಟ್ಟ ಕಂತೆ ಕಂತೆ ಹಗರಣಗಳು
ಜನತೆಯ ಮುಂದೆ ಬತ್ತಲಾಗಿವೆ
ಮೊರು ಬಿಟ್ಟವರಿಗೆ ಈಗ ಕಾದಿದೆ
ಸೆರಮನೆಯ ಭಯ
ಹೋದ ಮೇಲೂ ಹೊರಬರಲು
ನಡೆಯುವುದು ಹಲವು ನಾಟಕಗಳು
ಯಾರ ನಾಟಕವೂ ನಡೆಯುವುದಿಲ್ಲ
ಎಲ್ಲರೂ ಸಲ್ಲಬೇಕು ಇಲ್ಲಿಗೆ (ಸೆರೆಮನೆಗೆ)
ಇಂದಲ್ಲ, ನಾಳೆ
ಸಮಯ ಕಾಯುತಿದೆ (ಬಡ ಜನರ ಶಾಪ)
ಎಲ್ಲರ ಮೇಲೂ ಮುಯ್ಯಿತೀರಿಸಿಕೊಳ್ಳಲು
ಬಿಡುವುದಿಲ್ಲ ಯಾರನ್ನೂ
ಸರತಿಯಂತೆ ಎಲ್ಲರೂ ಶರಣಾಗಲೇಬೇಕು.

No comments:

Post a Comment

ಅವಳೇ ಶಕ್ತಿ, ಅವಳೇ ಪ್ರಪಂಚ

 ಧೈರ್ಯದ ನಡೆ,  ಪ್ರಶಾಂತ ಧ್ವನಿ. ಕನಸೇ ಕಂಗಳು, ಅಭಯವೇ ರಕ್ಷಣೆ. ಬಿರುಗಾಳಿಯೂ ಅವಳೇ, ಬೆಂಕಿಯ ಕೆನ್ನಾಲಿಗೆಯೂ ಅವಳೇ. ಶಾಂತ ಸಮುದ್ರವೂ ಅವಳೇ, ಕರುಣೆಯ ಕಡಲೂ ಅವಳೇ. ನಮ್ಮ...