Friday, October 21, 2011

ಮರೆಯಾದ ಚೇತನ

ಒಂದು ಚೈತನ್ಯದ ಚಿಲುಮೆಯೊಂದು ನಮ್ಮನ್ನು ಅಗಲಿತು
ಮನದ ಮೊಲೆಯಲ್ಲಿ ನೂರು ನೋವಿನ ಜ್ವಾಲೆಯ ಹುಟ್ಟುಹಾಕಿತು
ಏಕೆ ಮರೆಯಾದೆ ಓ ಚೇತನವೇ?
ನಮ್ಮನ್ನು ಅಗಲಿದೆ ಏಕೆ ಚೇತನವೇ?
ಸದಾ ನಗುಮುಖ, ಚೈತನ್ಯದ ಚಿಲುಮೆ
ಹಾಸ್ಯ,ತುಟಿಯಲ್ಲಿ ಸದಾ ನಗುವಿನ ಲಾಸ್ಯ
ಪ್ರೇರಕ ಶಕ್ತಿ,ಮನದಲ್ಲಿ ಪ್ರಶಾಂತತೆ;
ಇಂದು ಮರೆಯಾಯಿತೇಕೆ?
ಓ ಚೇತನವೇ! ಓ ಆತ್ಮಶಕ್ತಿಯೇ!
ನೀನು ನಮ್ಮಲ್ಲಿ ನೆಲೆಗೊಳ್ಳು ಎಂದೆಂದಿಗೂ
ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...