ಒಮ್ಮೊಮ್ಮೆ ಏನೂ ಕಾಣದಾಗುತ್ತದೆ
ತಲೆಯಲ್ಲಿ ಶೂನ್ಯತೆ ಹೊಕ್ಕು ಖಿನ್ನತೆಗೆ ದೂಡುತ್ತದೆ
ಏಕೆ? ಏನು? ಒಂದೂ ಗೊತ್ತಾಗುವುದಿಲ್ಲ
ಹೊರಬರುವುದು ಕಷ್ಟವಾದರೂ
ಹೊರಬರಲೇ ಬೇಕಲ್ಲ!
ಬಿಡಿಸಿಕೊಳ್ಳಲಾಗದ ಈ ಯಾಂತ್ರಿಕತೆ
ಪ್ರತಿಯೊಂದರಲ್ಲೂ ಬೇಸರ ತರಿಸುತ್ತಿದೆ
ಹೊಸತನ ಬಯಸುತ್ತಿದ್ದೇನೆ
ಕಣ್ಣಿದ್ದೂ ಕುರುಡನಾಗಿದ್ದೇನೆ
ಮುಂದಿನ ದಾರಿ ಮಾತ್ರ ಕಾಣದಾಗಿದೆ
ದೀಪಾವಳಿ ಮುಗಿದಿದೆ
ಮನದಲ್ಲಿ ಮಾತ್ರ ಅರಿವಿನ ದೀಪ ಮೊಡಲಿಲ್ಲ
ಮನಕ್ಕೆ ಸಂತೋಷ ಎಲ್ಲಿಂದ ತರಲಿ
ಪೆಟ್ರೋಲ್,ಅನಿಲಗಳ ನಿತ್ಯಬಳಸುವ ದಿನಸಿಗಳ ಬೆಲೆಗಳು ಗಗನಕ್ಕೇರಿವೆ
ಶಾಸಕ,ಸಂಸದರ ಹಗರಣಗಳು ಅಸಹ್ಯಮೊಡಿಸುತ್ತಿದೆ
ರಾಜಕೀಯ ಬೇಸರಿಕೆ ಮೊಡಿಸುತ್ತಿದೆ
ಸಾಹಿತಿಗಳ ಗುಂಪುಗಾರಿಕೆ ಉಸಿರುಗಟ್ಟಿಸುತ್ತಿದೆ
ಆಫೀಸಿನಲ್ಲೋ ಚಮಚ,ಬಕೆಟುಗಳದ್ದೇ ಸದ್ದು
ಮೇಲಕ್ಕೇರಲಾಗದೆ,
ಕೆಳಗಿಯಲಾಗದೆ,
ಅತಂತ್ರ ಸ್ಥಿತಿಯಲ್ಲಿ ಬಳಲುತ್ತಿದ್ದೇನೆ
ಸಂತೋಷ,ಅಣ್ಣಾ ಮಾತ್ರ ಆಶಾಕಿರಣವಾಗಿದ್ದಾರೆ
ಮುಂದೆ ಹೋಗಲೇಬೇಕು
ಕಣ್ಣುಮುಚ್ಚಾದರೂ ಸರಿ ಕಾಲದೂಡುತ್ತೇನೆ
ಆ ಸರಿಯಾದ ಕಾಲಕ್ಕೆ, ಸರಿಯಾದ ನಿರ್ಣಯ ತೆಗೆದುಕೊಳ್ಳುತ್ತೇನೆ
Subscribe to:
Post Comments (Atom)
ನನ್ನ ಭರವಸೆ
ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ಇಂದೇಕೆ ಹೂವೇ ನಿನ್ನ ನಗುವು ಉಮ್ಮಳಿಸಿದೆ ರಾಮ ಬರುವೆನೆಂದೇ? ರಾಮ ಬರುವೆನೆಂದೇ? ಗಾಳಿಯಲಿಂದೇಕೆ ಸುಗಂಧ ಪಸರಿಸಿದೆ ಹೆಚ್ಚಾಗಿ ರಾಮ ಬರುವೆನೆಂದೇ? ರಾಮ ಬರುವೆನೆಂದೇ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
No comments:
Post a Comment