Monday, December 26, 2011

ಅಳುದಾದರೆ ಅತ್ತು ಬಿಡು


ಅಳುದಾದರೆ ಅತ್ತು ಬಿಡು
ಮನದಲ್ಲಿ ನೋವುಗಳ ಬಚ್ಚಿಡಬೇಡ

ಮನಸ್ಸು ಆಕಾಶದಂತೆ
ಕರಿಮೋಡ ಭಾರವಾದ ನೋವುಗಳಂತೆ
ಆಕಾಶವ ಕರಿಮೋಡ ಬಳಸಿದರೆ
ಆಕಾಶವೂ ಅಳುವುದು ಮಳೆಯ ಸುರಿಸಿ

ಮನಸ್ಸು ಆಕಾಶದಂತೆ
ತಿಳಿಯಾಗಿಡು ಮನದ ಭಾರವ ಹೊರಚೆಲ್ಲಿ
ಜಾಗಕೊಡು ಮುಂದೆ ಬರುವ ನೋವುಗಳಿಗೆ
ಮನವ ತಿಳಿಯಾಗಿಟ್ಟು ಸಹಕರಿಸಿ

ಮನಸ್ಸು ಆಕಾಶದಂತೆ
ಆಕಾಶಕ್ಕೆ ಹಾರಬೇಕು ಮನದ ರೆಕ್ಕೆ ಬಿಚ್ಚಿ
ಮನವು ತೇಲಬೇಕು ನೋವುಗಳ ಬದಿಗಿಟ್ಟು
ಮನವು ಭಾರವಾದರೆ ಹಾರುವುದಾದರೂ ಹೇಗೆ? ಯೋಚಿಸು

ಅಳುವುದಾದರೆ ಅತ್ತು ಬಿಡು
ಮಳೆಯೊಡನೆ ಯಾರಿಗೂ ಅನುಮಾನ ಬರುವುದಿಲ್ಲ
ನಿನ್ನ ನೋವು,ಮೋಡ ಎರಡು ಒಂದಾಗಿ ಕಡಲ ಸೇರಲಿ
ಮತ್ತೆ ಮೋಡ,ನೋವು ಕಟ್ಟಬೇಕಲ್ಲ

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...