Wednesday, December 28, 2011

ಬದಲಾವಣೆಗೆ ಪಕ್ಕಾಗು


ಮನದ ನೋವೇ ಗರಿಗೆದರಬೇಡ
ಮನದ ನೆಮ್ಮದಿಯ ಹಾಳುಗೆಡವಬೇಡ
ಮನಕ್ಕೆ ನೋವಾಗಿದೆ ನಿಜ, ಬೇಡ, ಬೇಡ
ಮತ್ತೆ ಮತ್ತೆ ನೆನಪಿಸಿ ಎದೆಗುಂದಿಸಬೇಡ||

ಮನದಲ್ಲಿ ನೋವಿದೆ
ನೋವಿಗೆ ಪರಿಹಾರವಿದೆ
ತುಸು ಕಾಯಬೇಕಿದೆ
ತಾಳ್ಮೆಯ ಅಗತ್ಯವಿದೆ||

ಮನವೇ ಬಲವಾಗು
ನೋವುಗಳ ಪ್ರೀತಿಸಿ ತಲೆಬಾಗು
ನವೋದಯದ ಸ್ಪರ್ಧೆಗೆ ಛಲವಾಗು
ಬದಲಾವಣೆಗೆ ಪಕ್ಕಾಗು||

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...