ನೀಲಂ


ಬೆಳಗಲೇ ಬೇಕು ಕತ್ತಲಾದ ನಂತರ
ಅದೇ ಅಲ್ಲವೇ ದಿನಚರಿ
ಆದರೆ ಎಲ್ಲರ ನಿರೀಕ್ಷೆ ಹುಸಿಯಾಗಿತ್ತು ನಿನ್ನೆ
      ಬೆಳಕು ಬರಲೇ ಇಲ್ಲ
ಏಕೆಂದರೆ ಎಲ್ಲೆಡೆಯಲ್ಲೂ ವ್ಯಾಪಿಸಿದ್ದಳು ನೀಲಂ
ಮಂಕು ಕವಿದಿದ್ದ ಆಕಾಶರಾಜ
ಸೂರ್ಯತೇಜ ಎಂದಿನಂತೆ ಬರಲಿಲ್ಲವೆಂದು
ಆಗಸದಲ್ಲಿ ಎಲ್ಲೆಲ್ಲೂ ಶೋಕಾಚರಣೆ
ಬೆಳಗಿನಿಂದಲೇ ಶುರುವಿಟ್ಟಿದ್ದ ಕಣ್ಣೀರು ಹರಿಸಲು
ಮೂರು ದಿನ ಸ್ವಾಂತನಗೊಳಿಸುವಳಂತೆ ನೀಲಂ.




ಸೂಚನೆ: ’ನೀಲಂ’ ಚಂಡಮಾರುತದ ಹೆಸರು
ದಿನಾಂಕ: ೩೧,೧೦,೨೦೧೨ ರಿಂದ ೨.೧೧.೨೦೧೨ ರವರೆಗೂ ಬೆಂಗಳೂರಿನಲ್ಲಿ ಮಳೆಯ ಜೊತೆಗೆ ಚಳಿಯನ್ನೂ ತರುತ್ತೆ ಎನ್ನುವ ಹವಾಮಾನ ಇಲಾಖೆಯ ಮುನ್ಸೂಚನೆ. ಅದರಂತೆ ೩೧ ಹಾಗು ೧ ನೇ ನವೆಂಬರ್ ೨೦೧೨ ರಂದು ಮಳೆಯದೇ  ರಾಜ್ಯಭಾರ.

No comments:

Post a Comment

ನನ್ನ ಭರವಸೆ

  ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...