ಕನ್ನಡ ಶೋಕಾಚರಣೆ


ಕನ್ನಡ ರಾಜ್ಯೋತ್ಸವ ದಿನ ಮುಂದಿದೆ
ನೀಲಂ ಎಲ್ಲೆಡೆಯಲ್ಲೂ ಆವರಿಸಿದ್ದಾಳೆ
ಮೂರು ದಿನದ ಶೋಕಾಚರಣೆಯಂತೆ
ಕಣ್ಣೀರು ಸುರಿಸುತ್ತಲೇ ಇರುತ್ತಾಳಂತೆ

ಕನ್ನಡದ ಧ್ವಜಕ್ಕೆ ಅಧೀಕೃತ ಮಾನ್ಯತೆಯಿಲ್ಲ
ರಾಜ್ಯ ಉಚ್ಛನ್ಯಾಯಲದ ತೀರ್ಪಿದು
ಧ್ವಜವನ್ನು ಹಾರಿಸುವ ಹಾಗಿಲ್ಲ
ಧ್ವಜ ಹಾರಿಸಲು ಕಟ್ಟು-ಪಾಡುಗಳಿಲ್ಲ
ಸರ್ಕಾರಕ್ಕೆ ಧ್ವಜ ನಮ್ಮದು,ಕನ್ನಡಿಗರ ಆಸ್ತಿ
ಎಂದು ಸಮರ್ಥಿಸಿಕೊಳ್ಳುವ ನೈತಿಕತೆಯಿಲ್ಲ
ಸಾಹಿತಿಗಳು,ಕನ್ನಡ ಸಂಘ ಸಂಸ್ಥೆಗಳು,ಲ(ಬು)ದ್ದಿ ಜೀವಿಗಳೂ
ಮೌನಕ್ಕೆ ಶರಣಾಗಿ ಕನ್ನಡ ನಾಡು,ನುಡಿ,ಸಂಸ್ಕೃತಿಗೆ ದ್ರೋಹಬಗೆದಿದ್ದಾರೆ
ಕನ್ನಡ ನುಡಿ ನಲುಗುತ್ತಿದೆ,ಸೊರಗುತ್ತಿದೆ ಕನ್ನಡನಾಡಲ್ಲೇ....
ಅದಕ್ಕೆ ಎಲ್ಲೆಡೆಯಲ್ಲೂ ಶೋಕಾಚರಣೆ,ಕಣ್ಣೀರ ಆರಾಧನೆ ’ನೀಲಂ’ನಿಂದ.

No comments:

Post a Comment

ನನ್ನ ಭರವಸೆ

  ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...