Wednesday, May 29, 2013

ಅಧ್ಯಾಯದ ಆರಂಭ-ಕೊನೆ

ಏಕೆ ಹೀಗಾಗುವುದೋ ನಾ ಕಾಣೆ
ಎಲ್ಲವೂ ನಿರ್ಧಾರಿತವಾದುದಕ್ಕೆ ತಡೆ ಬೀಳುವುದೇಕೋ?
ಆಗೇ ಹೋಯಿತು ಅನ್ನುವುದರೊಳಗಾಗಿ
ಇನ್ನೇನೋ ಆಗುವತ್ತ ನಿರ್ಧಾರ ಹೊರಳಿರುತ್ತದೆ
ಬದ್ಧತೆ,ದೃಢತೆ ಮಗ್ಗುಲು ಮಲಗಿಕೊಳ್ಳುತ್ತದೆ
ವಚನ ಭ್ರಷ್ಟತೆ ನಗುತಾ ಹೊರಹೊಮ್ಮುತ್ತದೆ
ಮನಸ್ಸುಗಳು ನರಳುತ್ತದೆ
ಒಂದು ಅಧ್ಯಾಯದ ಕೊನೆ
ಮತ್ತೊಂದು ಅಧ್ಯಾಯದ ಆರಂಭ
ಕೊನೆ ಮೊದಲಿಲ್ಲದ ಕಾಲ ನಾಳೆಗೆ ಹೊರಳುತ್ತದೆ
ಉದಯರವಿ ಮತ್ತೊಂದು ಭರವಸೆಯ ದಿವಸ ಕಾದಿರಿಸುವನು ಎಲ್ಲರಿಗೂ||

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...