Monday, May 20, 2013

ಜಲ ಬರಿದು.....


ಜಲ ಬರಿದು.....
ಬರಿದಾಗುತ್ತಿದೆ ವಸುಂಧರೆಯ ಒಡಲು
ಕೆರೆ,ತೊರೆ,ನದಿ,ಜೀವನದಿ ಎಲ್ಲಾ ಬಟ್ಟಾಬಯಲು
ಕೇಳಲ್ಲಿ ಪ್ರಾಣಿ,ಪಕ್ಷಿ ಸಂಕುಲದ ಮೂಕ ಹುಯಿಲು
ಇಂದೇ ಬರೆದಿಡು ನಾಳೆಗೆ ನಿನ್ನಯ ಉಯಿಲು
ಸರ್ಕಾರ ಮಾಡಬೇಕಿದೆ ಜನರಿಗೆ ಅಪೀಲು
ಉಳಿಸಿ ಉಳಿಸಿ ಜೀವ ಜಲ ಉಳಿಸಿ||

ದುಡ್ಡು ಕೊಡುವೆವು;
ನೀರು ಸಿಗುವುದು;
ನಮ್ಮಯ ಜನರ ಅಹಂಕಾರ,ಧರ್ಪ;
ಅರಿತು ಬಳಸುವವರು ಯಾರಿಲ್ಲ ಇಲ್ಲಿ;
ಎಚ್ಚರಿಕೆ ಕೋರಿಕೆಗಳಿಗೆ ಬೆಲೆ ಇಲ್ಲ ಇಲ್ಲಿ;
ಜಲಕ್ಷಾಮ ಬಂದಾಯ್ತು;
ಎಚ್ಚರಗೊಳ್ಳದಿರೆ ಅಪಾಯ ಕಾದಿದೆ
ಊರಿಗೆ ಊರೇ ಸಾಯುವುದು ಖರೆ
ಕೇಳು ನೀ ಮನುಜ ವಸುಂಧರೆಯ ಕರೆ
ಎಲ್ಲೆಡೆ ಮುಕ್ಕುವುದು ಸೂತಕ
ಹಣ,ಅಂತಸ್ತು,ಸಂಪತ್ತು ಮಣ್ಣುಗೂಡುವುದು
ಎಚ್ಚರಗೊಳ್ಳೋ ಮನುಜ
ರಕ್ಷಿಸು ಜೀವಜಲ
ಉಳಿಸು ಮನುಜ ಕುಲ||

ಚಿತ್ರಕೃಪೆ:ಕನ್ನಡಪ್ರಭ




No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...