Thursday, July 11, 2013

ನಂಬಿ ಕೆಟ್ಟೆವೇ?

ನಂಬಿ ಕೆಟ್ಟೆವೇ ಇವರನ್ನು
ದೊಡ್ಡವರು ಏಳಿಗೆ ಬಯಸುವರೆಂದು
ನಂಬಿದ್ದೇ ದೊಡ್ಡ ತಪ್ಪಾಯಿತೇನೋ?
ಅವಕಾಶಗಳನ್ನು ತಿಂದುಂಡವರು
ಹೊಟ್ಟೆಯ ತುಂಬಾ ತುಂಬಿಕೊಂಡವರು
ಹಸಿವ ಅಗ್ನಿಯಲ್ಲಿ ಬಳಲುವವರ ಕಷ್ಟ ಅರ್ಥವಾದೀತೇ?

ಮೌನವಹಿಸಿದ್ದೇವೆ ಎಲ್ಲವೂ ನೋಡುತ್ತಾ
ಪ್ರಶ್ನೆ ಕೇಳಿದರೆ ಬಾಯಿ ಬಡಿಯುವರು
ಇದೆಂಥಾ ಶೋಷಣೆಯೋ? ಇಲ್ಲ ಗುಲಾಮಗಿರಿಯ ಪೋಷಣೆಯೋ?
ಸ್ವಾತಂತ್ರ ಕಳೆದುಕೊಂಡ ಸ್ಥಿತಿ ನಮ್ಮೆಲ್ಲರದೂ
ಪ್ರತಿಭಟಿಸುವುದೆಂತೋ ತಿಳಿಯುತ್ತಿಲ್ಲ ಯಾರಿಗೂ
ಒಳಒಳಗೇ ಕುದಿಯುತ್ತಾ
ಎಂದು ಅಗ್ನಿಪರ್ವತದಂತೆ ಒಳಕುದಿ ಸ್ಪೋಟಿಸುವುದೋ?

No comments:

Post a Comment

ಈ ಸಮಯ

ಈ ಸಮಯ ಅತ್ಯಮೂಲ್ಯ , ಮುಂದೆಂದೂ ಬಾರದು ಗೆಳೆಯಾ .   ಸಮಯ ಹರಿಯುವ ನದಿಯಂತೆ , ಹಿಂತಿರುಗಿ ಬಾರದು ಎಂದೂ .   ಹಣ ಮತ್ತೆ ಸಂಪಾದಿಸಬಹುದು , ಸಮ...