Tuesday, December 9, 2014

ಏಕಾಂತ

ಮರದ ಕೆಳಗೆ ಏಕಾಂತ ,ಒಂಟಿತನದ ಭಾವ
ದೂರದಲ್ಲಿ ಹಾರಿಬರುವ ಕಪ್ಪು ಮೋಡಗಳ ನೋಟ
ಅಳುಕುವ ಮನ,ರೋಧಿಸುವ ಭಾವ
ಏನನ್ನೋ ಕಳೆದುಕೊಂಡ ಶೂನ್ಯಭಾವ-ವೈರಾಗ್ಯವೆನ್ನಲೇ?
ಕತ್ತುಹಿಸುಕುವ ಚಳಿ
ಬೆಚ್ಚಿಬೀಳಿಸುವ ಗುಡುಗಿನ ಆರ್ಭಟ
ಕೊಚ್ಚಿಹೋಗುವ ಮಳೆಯಲ್ಲಿ ಸಿಲುಕಿದೆ ಜೀವ
ಸಾವು,ಬದುಕು ಮಗ್ಗುಲು ಮಲಗಿದೆ ಭರವಸೆ
ಕೊಚ್ಚಿ ಹೋಗಲಿ ನೋವುಗಳೆಲ್ಲಾ ಮಳೆಯ ನರ್ತನದಲ್ಲಿ
ಸೇರುವ ತವಕ ಹೆಚ್ಚಾಗಿದೆ ಹೊಸತನದ ಭಾವ ಅಳುಕುತ್ತಲೇ....

No comments:

Post a Comment

ಅನಂತ ಗಾನ

ಆತ್ಮದ ಹೃದಯ ' ಭರವಸೆ ', ಕಾಣದ ರೆಕ್ಕೆಗಳು ಅನಂತದೆಡೆಗೆ , ಕಣ್ಣು ತೆರೆದೊಡೆ ನಭವೇ ' ಅನಂತ '.   ' ಭರವಸೆ ' ಅನಂತ ಗೀತ...