Tuesday, October 20, 2015

ಹಠಯೋಗಿ

ಮನದಲೆಲ್ಲಾ ಸೂತಕದ ಛಾಯೆ
ತಲೆಬೇನೆ,ಆತಂಕದ ಕರಿಛಾಯೆ
ಬೇಡಬೇಡವೆಂದರೂ ಸುಳಿಯುವ ಮಾಯೆ
ಆಸೆ,ಕಪಟ ನಾಟಕವಾಡಿ ಗಹಗಹಿಸಿದೆ
ನೀ ಬಿಟ್ಟರೂ ನಾ ಬಿಡನೆಂಬ ಹಠಯೋಗಿ
ಆಹುತಿಯೋ,ಬಲಿಪಶುವೇ ಬೇಕೆಂಬ ಹಠ
ಸಿದ್ಧ ವಾಗೆ ನಿಂತಿದೆ ಈಗಲೇ ಬೇಕೆಂದು
ತಲೆಯೊಡ್ಡಲೋ,ಸಿಡಿದೇಳಲೋ
ದ್ವಂದ್ವ ಕದನ ಮನದಲ್ಲಿ ಸಂಚು ಹೂಡಿದೆ
ಯಾವುದು ಸರಿ?ಯಾವುದು ತಪ್ಪು?
ವಿವೇಕ ನರಳುತ್ತದೆ ಅಂಧಕಾರದಲ್ಲಿ 
ಆತಂಕ ಮನದಲ್ಲಿ ಸೋತುಬಿಟ್ಟರೆ?
ಗುರುವೇ ನಿನ್ನ ಕರುಣೆಯ ಬಲನೀಡು
ಎಲ್ಲಾ ದ್ವಂದ್ವಗಳ ಕಟ್ಟಿ ತಿಮಿರವ ಗೆಲ್ಲುವೆ

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...