Tuesday, October 20, 2015

ಹಠಯೋಗಿ

ಮನದಲೆಲ್ಲಾ ಸೂತಕದ ಛಾಯೆ
ತಲೆಬೇನೆ,ಆತಂಕದ ಕರಿಛಾಯೆ
ಬೇಡಬೇಡವೆಂದರೂ ಸುಳಿಯುವ ಮಾಯೆ
ಆಸೆ,ಕಪಟ ನಾಟಕವಾಡಿ ಗಹಗಹಿಸಿದೆ
ನೀ ಬಿಟ್ಟರೂ ನಾ ಬಿಡನೆಂಬ ಹಠಯೋಗಿ
ಆಹುತಿಯೋ,ಬಲಿಪಶುವೇ ಬೇಕೆಂಬ ಹಠ
ಸಿದ್ಧ ವಾಗೆ ನಿಂತಿದೆ ಈಗಲೇ ಬೇಕೆಂದು
ತಲೆಯೊಡ್ಡಲೋ,ಸಿಡಿದೇಳಲೋ
ದ್ವಂದ್ವ ಕದನ ಮನದಲ್ಲಿ ಸಂಚು ಹೂಡಿದೆ
ಯಾವುದು ಸರಿ?ಯಾವುದು ತಪ್ಪು?
ವಿವೇಕ ನರಳುತ್ತದೆ ಅಂಧಕಾರದಲ್ಲಿ 
ಆತಂಕ ಮನದಲ್ಲಿ ಸೋತುಬಿಟ್ಟರೆ?
ಗುರುವೇ ನಿನ್ನ ಕರುಣೆಯ ಬಲನೀಡು
ಎಲ್ಲಾ ದ್ವಂದ್ವಗಳ ಕಟ್ಟಿ ತಿಮಿರವ ಗೆಲ್ಲುವೆ

No comments:

Post a Comment

ಅವಳೇ ಶಕ್ತಿ, ಅವಳೇ ಪ್ರಪಂಚ

 ಧೈರ್ಯದ ನಡೆ,  ಪ್ರಶಾಂತ ಧ್ವನಿ. ಕನಸೇ ಕಂಗಳು, ಅಭಯವೇ ರಕ್ಷಣೆ. ಬಿರುಗಾಳಿಯೂ ಅವಳೇ, ಬೆಂಕಿಯ ಕೆನ್ನಾಲಿಗೆಯೂ ಅವಳೇ. ಶಾಂತ ಸಮುದ್ರವೂ ಅವಳೇ, ಕರುಣೆಯ ಕಡಲೂ ಅವಳೇ. ನಮ್ಮ...