Sunday, November 8, 2015

ಹರಿದ ನಾಲಗೆ

ನೋಡಿದೆಯಾ,ಕೇಳಿದೆಯಾ ಗೆಳೆಯ
ಎತ್ತರದ ಸ್ಥಾನದಲ್ಲಿರುವವರ ಮಾತುಗಳ
ಎಂಥ ಸ್ಥಿತಿ ಬಂತು ನಮ್ಮ ನಾಡಿಗೆ
ಇಷ್ಟೊಂದು ಬರವೇ ಬೌಧ್ದಿಕತೆಗೆ?
ನಾಡಿನ ಸ್ಥಾನಮಾನ, ಗೌರವವೆಲ್ಲಾ
ಮಣ್ಣುಪಾಲಾಗಿಸುತ್ತಿದ್ದಾರೆ ಈ ಮೂಢರು
ನಾಲಗೆಯ ಹರಿಬಿಡುವರು ಎಲ್ಲೆಯಿಲ್ಲದೆ
ಹಣ,ಅಧಿಕಾರ,ಸ್ಥಾನಮಾನದ ಅಹಂಮಿನಿಂದ
ಎಷ್ಟುದಿನ ನಡೆವುದು ಇವರ ಆಟ?
ನಾಗರೀಕತೆ ಬೆಳೆದಂತೆ ಎತ್ತಣದತ್ತ ನಮ್ಮ ಪಯಣ?
ಯಾವುದರ ಅಟ್ಟಹಾಸವಿದು ಬಲ್ಲೆಯೇನು?
ಯಾರು ಈ ನಾಟಕದ ಸೂತ್ರಧಾರ?
ಎಲ್ಲಬಲ್ಲವ ನೀನು ಸುಮ್ಮನೇ ನೋಡುತಿಹೆ
ತಿಳಿದೂ ತಿಳಿಯದವನಂತೆ, ಏನಿದರ ಗುಟ್ಟು?

No comments:

Post a Comment

ಅನಂತ ಗಾನ

ಆತ್ಮದ ಹೃದಯ ' ಭರವಸೆ ', ಕಾಣದ ರೆಕ್ಕೆಗಳು ಅನಂತದೆಡೆಗೆ , ಕಣ್ಣು ತೆರೆದೊಡೆ ನಭವೇ ' ಅನಂತ '.   ' ಭರವಸೆ ' ಅನಂತ ಗೀತ...