ಹರಿದ ನಾಲಗೆ

ನೋಡಿದೆಯಾ,ಕೇಳಿದೆಯಾ ಗೆಳೆಯ
ಎತ್ತರದ ಸ್ಥಾನದಲ್ಲಿರುವವರ ಮಾತುಗಳ
ಎಂಥ ಸ್ಥಿತಿ ಬಂತು ನಮ್ಮ ನಾಡಿಗೆ
ಇಷ್ಟೊಂದು ಬರವೇ ಬೌಧ್ದಿಕತೆಗೆ?
ನಾಡಿನ ಸ್ಥಾನಮಾನ, ಗೌರವವೆಲ್ಲಾ
ಮಣ್ಣುಪಾಲಾಗಿಸುತ್ತಿದ್ದಾರೆ ಈ ಮೂಢರು
ನಾಲಗೆಯ ಹರಿಬಿಡುವರು ಎಲ್ಲೆಯಿಲ್ಲದೆ
ಹಣ,ಅಧಿಕಾರ,ಸ್ಥಾನಮಾನದ ಅಹಂಮಿನಿಂದ
ಎಷ್ಟುದಿನ ನಡೆವುದು ಇವರ ಆಟ?
ನಾಗರೀಕತೆ ಬೆಳೆದಂತೆ ಎತ್ತಣದತ್ತ ನಮ್ಮ ಪಯಣ?
ಯಾವುದರ ಅಟ್ಟಹಾಸವಿದು ಬಲ್ಲೆಯೇನು?
ಯಾರು ಈ ನಾಟಕದ ಸೂತ್ರಧಾರ?
ಎಲ್ಲಬಲ್ಲವ ನೀನು ಸುಮ್ಮನೇ ನೋಡುತಿಹೆ
ತಿಳಿದೂ ತಿಳಿಯದವನಂತೆ, ಏನಿದರ ಗುಟ್ಟು?

No comments:

Post a Comment

ನನ್ನ ಭರವಸೆ

  ಪ್ರತಿದಿನ ಒಂದೊಂದು ಹೆಜ್ಜೆ ಅಭಿವೃದ್ಧಿಯ ಕಡೆಗೆ, ಹಿಂದಿಡಲಾರೆ ಮುಂದಿಟ್ಟ ಹೆಜ್ಜೆ ನನ್ನ ಕೆಲಸ ನನಗೆ, ಹೆಮ್ಮೆಯಿದೆ ಎನಗೆ , ನನ್ನ ಕೆಲಸದಲೆಂದ...