Sunday, November 8, 2015

ಮನದ ಭಾರ

ಮನದ ಮಾತುಗಳ ಹೇಳಿಕೊಳ್ಳೋಣವೆಂದರೆ
ಏನಿದು ಗೆಳೆಯ ನೂರೆಂಟು ಅಡ್ಡಿ ಆತಂಕಗಳು
ಮನಸ್ಸು ಹಗುರವಾಗಿಸೋಣವೆಂದರೆ
ಮನದ ಭಾರ ಹೆಚ್ಚಿತ್ತಿದೆಯೆ ಹೊರತು ಇಳಿಯುತ್ತಿಲ್ಲ
ನೋವಿನ ನಡುವೆ ಹೊರಳಾಡುವುದೇ ಸುಖವೆನಿಸಿದೆ
ಸಂತೋಷವೇನೆಂದು ಮರೆತು ಹೋಗಿದೆ
ಜೀವನಚಕ್ರ ಸಲೀಸಾಗಿ ಹೊರಳದೆ
ತ್ರಾಸದಾಯಕವಾಗಿದೆ ಮೆಲ್ಲಮೆಲ್ಲನೆ
ಏನೋ ಆತಂಕ ! ಏನೋ ಬೇಸರ!ಏನೋ ಹೇವರಿಕೆ!
ಮರಳಿಬಾರದ ದಿನಗಳ ನೆನಹುಗಳು ಅಣಕಿಸುತ್ತಿದೆ
ಅಟ್ಟಹಾಸದಿಂದ ನಗುವ ಕಾಲ
ಅಹಂಮಿನ ಕಾಲು ಮುರಿದಿದೆ ನೋವ ಮರೆಸುತ್ತಾ
ಇದೇ ಜೀವನವೆಂಬ ಸಮಾಧಾನದ ತೆವಲು ನಗೆ
ಬೀರುತ್ತಾ ಎಲ್ಲವನ್ನೂ ಅನುಭವಿಸುತ್ತಾ ತೆವಳಿದೆ//

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...