Monday, November 19, 2018

ತೀರದ ಭರವಸೆ

ಬೆಳಗೆಂದರೆ ಅಚ್ಚರಿ
ಅಮೋಘ ಅನುಭವದ ರಸಸಮಯ
ಹಾರುವ ಹಕ್ಕಿಗಳ ಕಂಡಾಗ
ಮನಸ್ಸು ಹಗುರ,ಅತ್ಯುತ್ಸಾಹ
ಕಾಯುತ್ತಿದುವ ರಣಹದ್ದುಗಳ ಕಂಡಾಗ
ಮನಸ್ಸು ಅಯೋಮಯ,ಭಯದ ಕೂಪ
ಪಾರಾಗುವುದೆಂತೋ?......
ಪ್ರಕೃತಿ ನಿಯಮ ಮೀರಿದವರಾರು?
ಇಂದೇನೋ ಶಕ್ತಿಯಿಂದ ಪಾರಾಗಬಹುದು
ಆದರೆ ನಾಳೆ, ನಾಳೆಗಳ ನಂತರ
ನಿಶಕ್ತಿಯು ಕಾಡದೇ?...
ಬಲಿಯಾಗುವುದು ನಿಶ್ಚಿತವೇ!
ದಾರಿಯಾವುದು?
ರಕ್ಷಿಸುವವರಾರು?
ಆದರೂ ಬೆಳಗೆಂದರೆ ಅಚ್ಚರಿ
ನಾಳೆ,ನಾಳೆಗಳ ತೀರದ ಭರವಸೆ//

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...