Sunday, October 6, 2019

ಅಮರ ಸ್ಫೂರ್ತಿ

ಮೌನ, ಮೌನದಾಳದೊಳಗಿಂದ
ಎದ್ದೇಳು! ಎದ್ದೇಳು! ಓ ಅಮರ ಸ್ಫೂರ್ತಿಯೇ,
ಕಾಲಚಕ್ರದ ಮಾಯಾಜಾಲಕ್ಕೆ ಸಿಲುಕದೆ
ಏರೂ,ಏಕಾಂಗಿಯಾಗಿ ಅಮರತ್ವದೆಡೆಗೆ;
ಕತ್ತಲದೊಳಗಣ ಪಿಸುಮಾತುಗಳ ಕಡೆಗಣಿಸು
ನೋವು,ಆಕ್ರಂದನ, ದುಗುಡ,ಸಂಘರ್ಷಗಳ ತೊರೆ
ಮೌನದೊಳಗಡೆ ಎಲ್ಲವನ್ನು ತೂರು ।।

ಎಲ್ಲವನ್ನು ನೋಡು ಒಳಗಣ್ಣಿನಿಂದ
ಬೆರಗುಗಣ್ಣಿನಿಂದ ಮೌನವಾಗಿ ಅವಲೋಕಿಸು
ಮಾತುಗಳ ಕೇಳಿಸಿಕೋ! ನಸುನಗು ಒಳಗೊಳಗೇ
ಇಂದು ನಾಳೆಗಳ ಅಳೆದು ನೋಡು
ಉತ್ತರವಿಲ್ಲದ ಪ್ರಶ್ನೆ ಯಾವುದಿದೆ? ಆಲೋಚಿಸು
ವಿಶ್ರಾಂತಿಯ ಬಿಡು, ಏಕಾಂಗಿಯಾಗಿ ನಡೆ
ಪ್ರಕೃತಿಯೊಳಗಡಗಿದೆ ಸಮಸ್ಯೆಗಳಿಗೆ ಉತ್ತರ
ನೋಡು, ಆಳಕ್ಕಿಳಿ, ಚಿಂತಿಸು,ಆಲೋಚಿಸು
ಶಾಶ್ವತವಾಗಿರಲಿ,ಶಾಂತಿಯಿಂದಿರಲಿ, ತಾಳ್ಮೆಯೊಂದಿರಲಿ
ಏಕಾತ್ಮತಾ ಸೂತ್ರ ಒಂದೇ ಮೌನ, ಶಾಂತಿ
ಅನುಭವಿಸು ,ಪರಿಗ್ರಹಿಸು ಅಮರ ಸ್ಫೂರ್ತಿಯ ।।

No comments:

Post a Comment

ಬಾಂದಳದ ತಾರೆಗಳು

ಬಾಂದಳದಲ್ಲಿ ತಾರೆಗಳ ಹೂ ಅರಳಿದೆ, ನಗುನಗುತ್ತಲೇ ಕಣ್ಣ ಮಿಟುಕಿಸುತ್ತಿವೆ. ಮನದ ಬಾಂದಳದಿ ಸಾವಿರ ವಿಚಾರಗಳಿವೆ, ಅರಳುವ ಮೊದಲೇ ಆತಂಕದಿ ಮುದುಡುತ್ತಿವೆ. ಆ ತಾರೆಗಳು ಸ್ವತಂ...