Monday, October 7, 2019

ಮೌನ ತಬ್ಬಿದೆ

ಮೌನ ತಬ್ಬಿದೆ ಬೆತ್ತಲಾದ ಮಾನವನು
ನೊಂದು,ಬೆಂದ ಮನಕೆ ಸ್ವಾಂತನ ಬೇಕಾಗಿದೆ||

ಎಲ್ಲಿಂದಲೋ ಬಂದವರು ನಮ್ಮನಾಳುತಿಹರು
ನಮ್ಮ ಮನೆಯಲ್ಲೇ ನಾವು ಪರಕೀಯರಾಗಿಹೆವು।।

ಬಣ್ಣದ ಮಾತುಗಳು ತೆರೆಯ ಮೇಲೆ
ಕತ್ತಿ ಮಸೆಯುತಿಹರು ತೆರೆಯ ಹಿಂದೆ।।

ನಂಬಿಕೆ, ಮೌಲ್ಯಗಳು ಮೂಲೆ ಗುಂಪಾಗಿವೆ
ಕಾಲು ನೆಕ್ಕುವರೇ ಗೆಳೆಯರು ನೈತಿಕತೆ ಹಿಂದೆ ಸರಿದಿದೆ।।

ಬೇಕಂತಲೇ ನಮ್ಮ ಕೆಳಗೆದೂಡಿದರು
ಕೈಗೆಲ್ಲಾ ಎಣ್ಣೆ, ಚಾಚಿಹರು ಮುಂದೆ
ಕೈಲಾಗದವರೆಂದು ಕುಟುಕುತಿಹರು।।

ನಮ್ಮವರು ಸ್ವಾರ್ಥಿಗಳು, ಸಮಯ ಸಾಧಕರು
ತಮ್ಮ ಜೋಳಿಗೆ ತುಂಬಿಸಿಕೊಂಡರು
ತಮ್ಮ ಕುಹಕದಿಂದ ನಮ್ಮೆದೆಯ ಇರಿದರು।।

ಮೌನ ತಬ್ಬಿದೆ ಬೆತ್ತಲಾದ ಮನವನು
ನಂಬಿಕೆಯ ಕೊಂದರು,
ನಮ್ಮಯ ಸ್ಥಿತಿಯ ಕಂಡು ನಕ್ಕರು।।

ಮೌನ ತಬ್ಬಿದೆ, ಮನವು ನರಳಿದೆ,ಬಿಕ್ಕಿದೆ
ಕಾಲಕ್ಕೆ ನಮಿಸುತ್ತಾ,ತೊಳಲುತ್ತಾ...

No comments:

Post a Comment

ಕಡಲೇ.....

  ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...