Friday, November 29, 2019

ತಣಿಸು ಬಾ

ಕಣ್ಣ ಮುಚ್ಚಿದರೂ ಅವನದೇ ಚಿಂತೆ
ಕಣ್ಣತೆರೆದೆನೆಂದರೆ ಅವನಿಲ್ಲದ ನೆವ
ನಿದಿರೆಯ ಆಹ್ವಾನಿಸಿ ಅವನ ಕನಸ ಕಾಣ್ವಹಂಬಲ
ನಿದಿರೆಯನ್ನೂ ದೋಚಿದ ಕಳ್ಳನವನು
ನಿದಿರೆಯಲ್ಲೂ ಅವನ ಸೇರುವ ಹಂಬಲ ವ್ಯರ್ಥ
ಸೊರಗಿದೆ ಈ ತನುವು ಬಳಲಿದೆ ಈ ಮನ
ಚೈತನ್ಯವಾಗಿ ನೀ ಬಳಿ ಬರುವೆಯೆಂದು ಕಾದಿಹೆ
ನಿನ್ನ ತೋರುವ ದಿನವದಾವುದೋ ನಾ ಕಾಣೆ?
ಹಂಬಲದಿಂದೊಂದು ದಿನ ನಿನ್ನ ನೋಡುವ ಭರವಸೆ
ನಿದಿರೆ ನೀ ಬಾರದೆ ನಾ ಹೇಗೆ ಕಾಣಲಿ ಅವನ ಕನಸ ?
ಒಮ್ಮೆ ಬಂದು ಹೋಗು ಬಾ ಈ ವಿರಹವ ತಣಿಸು ಬಾ ।।

No comments:

Post a Comment

ರಾತ್ರಿ ಊಟ: ಧ್ಯಾನ

ರಾತ್ರಿ ಊಟ ಮಾಡುವಾಗ .... ಶಾಂತಿಯುತ ವಾತಾವರಣವಿರಲಿ,  ಸಂಜೆ ದೇವರ ಬಳಿ ದೀಪಗಳ ಬೆಳಗಿಸಿ, ಹಿತವಾದ ಸಂಗೀತ ಮನಸ್ಸಿಗೆ ಕೇಳಲಿ,  ಊಟದ ಮೇಜಿನ ಬಳಿ ವಾದ ವಿವಾದ ಬೇಡ,  ಆಹಾರ...