ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ
ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ
ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ
ಯಾರು ಕಾರಣರು ಇದಕ್ಕೆಲ್ಲಾ?
ಹುಣ್ಣಿಮೆಯ ರಾತ್ರಿಯಲ್ಲಿ
ಸೌಂದರ್ಯವೇ ತಾನಾಗಿ ನಗುತಿಹುದು
ಮಲ್ಲಿಗೆಯ ಪರಿಮಳ ಗಾಳಿಯಲ್ಲಿ
ತೇಲಿ ಬಂದು ವಿರಹ ಉದಯಿಸಿಹುದು
ಯಾರ ಹೃದಯ ವೇದನೆಗೆ
ನೆಮ್ಮದಿಯ ದಾರಿಯಾಗಿ ಬಂದಿಹುದೋ
ಯಾರ ವಿರಹ ವೇದನೆಗೆ
ತಂಪೆರೆಯಲು ಸ್ವರ್ಗದಿಂದಿಳಿದಿಹುದೋ?
ಏಕೆ ನಗುತಿಹೆ ಮಲ್ಲಿಗೆ ಹೂವೇ ?
ಏಕೆ ಸುಗಂಧವ ಪಸರಿಸಿ ನಿಂತಿರುವೇ ?
ಯಾರ ಸ್ಪರ್ಶದ ಸುಖವೋ ನೀನು
ಶಾಂತಿ ನೆಮ್ಮದಿಯ ಅರಸಿಯೇ ನೀನು ।।
Sunday, November 24, 2019
Subscribe to:
Post Comments (Atom)
ಅಜೇಯ
ಕಾಳ ರಾತ್ರಿಯ ಕತ್ತಲು ನನ್ನ ಆವರಿಸಿ ಕಾಡಿದೆ , ಕಪ್ಪು ಕತ್ತಲು ಅಡಿಯಿಂದ ಮುಡಿಯವರೆಗೂ ಕಟ್ಟಿಹಾಕಿ . ಎಲ್ಲಾ ದೇವರುಗಳಿಗೂ ನನ್ನ ಅನಂತಾನಂತ ಧನ್ಯವಾದಗ...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ರವಿ ಜಾರಿದ ಕೆಲಸವಾಯ್ತೆಂದು ಲೋಕರೂಡಿ ಹಕ್ಕಿಗಳು ಗೂಡು ಸೇರಿದವು ಕತ್ತಲಾವರಿಸಿ,ನೀರವತೆ ಪಸರಿಸಿ ಪ್ರೇಮ ಹೃದಯಗಳಲ್ಲಿ ಪ್ರಣಯದ ಕಿಚ್ಚು ಹೊತ್ತಿಸಿ..... ಹೊನ್ನ ಚಂದ್ರಿಕೆಗ...
No comments:
Post a Comment