ಹೊರಟುಹೋದೆಯಾ ಮಾಧವ ಬಳಿಬಂದು ಹೋದುದೇಕೆ?
ಮನದಲಿ ಹಂಬಲ ತುಂಬಿದೆ ವಿರಹದಿ ಬಳಲಿಹೆನು
ಕೋಪದಿಂದೊಂದು ಮಾತಿಗೆ ಮುನಿಸಿಕೊಂಡೆಯಾ
ಬಳಲಿ ಬಳಲಿ ಬೆಂಡಾದವಳಿಗೆ ಉಪವಾಸ ವ್ರತವೇ?
ಬಲುದಿನದನಂತರ ಬಳಿಬಂದೀ ಶುಕ್ಲಪಕ್ಷದ ಚಂದಿರನಂತೆ
ತಾಪದಿ ಒರಟು ಪ್ರೀತಿಯಮಾತಿಗೆ ನೀ ನೊಂದೆಯಾ?
ಹೋಗಬೇಡ! ಹೋಗಬೇಡಾ! ಇನಿಯಾ ತಾಳೆನು ಈ ವಿರಹ
ಹೃದಯ ಸೋತಿದೆ ತನುವು ನಲುಗಿದೆ ನಿನ್ನ ನೋಡದೇ
ಹೋಗಬೇಡ ಗೆಳೆಯಾ ನನ್ನ ತೊರೆದು ಹೋಗಬೇಡ ಇನಿಯಾ...
No comments:
Post a Comment