ಮಥುರೆಯ ರಾಜಕಾರಾಗೃಹದಲಿ ಬಂದಿಯಾಗಿಹರು ದೇವಕಿ ವಸುದೇವರು
ಸುತ್ತಮುತ್ತಲು ಹರಡಿದೆ ಕಾಡು ಕತ್ತಲು ಕಾಯುತಿದೆ ಜನತೆ ದೇವಕುಂಜರಗೆ
ಕಂಸನ ಅಟ್ಟಹಾಸ ಮುಗಿದಿಲ್ಲ ಏಳು ಕಂದಮ್ಮಗಳ ಹನನದ ನಂತರವೂ
ಕಾಯುತಿಹನು ಕೊನೆಗಾಣಿಸಲು ಎಂಟನೆಯ ಕಂದನಿಗೆ ಅಮರನಾಗುವ ಹಂಬಲದಿ||
ಮೈಮರೆಯಿತು ಮಥುರೆ ಕತ್ತಲ ಇರುಳಿನಲಿ ಬಂದಿಳಿಯಿತು ದೇವ ಕುಂಜರ
ಸದ್ದಿಲ್ಲದೇ ಮಾಯೆ ಹೊರಡಿಸಿತು ಗೋಕುಲಕೆ ವಸುದೇವನ ನಂದನನ
ಭೋರ್ಗರೆಯುವ ಯಮುನೆಯ ಹೊರಳಿನಲಿ ಹೊರಟಿತು ಗೋಕುಲಕೆ
ಮಮತಾಮಯಿ ಯಶೋಧೆಯ ತಾಯ ಮಡಿಲು ತುಂಬಿತು ವಸುದೇವನ ಕಂದನು||
ಬೆಣ್ಣೆ ಮೆದ್ದು ನಲಿಯುತ್ತಿತ್ತು ತರಲೆ ಮುದ್ದು ನಂದಗೋಪನ ಕೃಷ್ಣನು
ಗೋಪಿಕೆಯರ ಮನ ಸೆಳೆಯುತ್ತಿತ್ತು ಕೊಳಲನೂದುವ ಗೋಪಿಕೃಷ್ಣನು
ಗೋಪಿಕೆ-ರಾಧೆಯ ಸಂಗದಿಂದ ಹರಣವಾಯಿತು ಸಂಸಾರಬಂಧನವು
ಮಾಯೆ ಎನ್ನಲೋ! ಲೀಲೆ ಎನ್ನಲೋ! ನಲಿಯಿತು ಗೋಕುಲ ಅವನ ನೆರಳಲಿ||
ಬೆಣ್ಣೆ ಬಿಟ್ಟ ,ಸಂಗ ಬಿಟ್ಟ, ಬಂಧ ಬಿಟ್ಟ ಹೊರಟ ಲೋಕದ ನೆರವಿಗೆ
ಲೋಕ ಕಂಟಕ ಕಂಸನ ಸಂಹರಿಸಿ ಮಥುರೆಯ ಉದ್ಧರಿಸಿದ
ಹೊರಟನವನು ಕಾಲಕರೆದ ಕಡೆಗೆ ದ್ವಾರಕೆಯ ಸೃಜಿಸಿ ನಡೆದನು
ಪಾಂಡುನಂದನರ ಕಷ್ಟಗಳಿಗೆ ಹೆಗಲುಕೊಟ್ಟು ಉದ್ಧರಿಸಲು ನಿಂದನು।।
ಶಿಷ್ಟ ಜನರ ರಕ್ಷಿಸಿಸಲು ದುಷ್ಟ ಜನರ ಶಿಕ್ಷಿಸಲು ಶಸ್ತ್ರ ಹಿಡಿಯದೆ ನಿಂತನು
ಘೋರ ಯುದ್ಧ ಭೂಮಿಯಲ್ಲಿ ನಿಂದು ಸಖಗೆ ದೇವಗೀತೆಯ ಉಸುರಿದನು
ವೀರ ಮಹಾವೀರರ ಬಲಾಬಲಗಳು ಅವನ ಮುಂದೆ ಹುಡಿ ಪುಡಿಯಾದವು
ಯಾವುದು ಸತ್ಯವೋ! ಯಾವುದು ನಿತ್ಯವೋ! ಅವೇ ಅಲ್ಲಿ ನೆಲೆಗೊಂಡವು||
Friday, April 17, 2020
Subscribe to:
Post Comments (Atom)
ಕಡಲೇ.....
ಕಡಲೇ , ನೀನು ಎಷ್ಟು ಅಗಾಧ ! ಕಣ್ಣ ನೋಟ ಹರಿಸಿದಷ್ಟೂ ವಿಶಾಲ . ಆಶ್ಚರ್ಯ , ಪರಮಾಶ್ಚರ್ಯ — ನೀನು ಅನಂತ , ಎಲ್ಲಾ ನದಿತೊರೆಗಳೂ ನಿನ್ನ ಸೇರುವಾಸೆ ಏಕೆ ?...
-
ದೀಪ ಜ್ಯೋತಿಯೇ ಪರಂ ಬ್ರಹ್ಮ ದೀಪಜ್ಯೋತಿಯೇ ಜನಾರ್ಧನ ದೀಪವೇ ಮನದ ಚೈತನ್ಯವು ಜೀವನ ಬೆಳಗುವ ದೀಪವೇ ನಿನಗೆ ನಮನ|| ಮನವ ಅರಳಿಸುವ ಆತ್ಮಜ್ಯೋತಿಯೇ ಅಂಧಕಾರವ ಕಳೆಯುವ ...
-
ಯಾರ ಸ್ಪರ್ಶಕೆ ಈ ಮಲ್ಲಿಗೆ ನಗುವಂತಾಗಿದೆ ಈ ಮೊಗ್ಗಿನ ಸೌಂದರ್ಯ ಹಿಗ್ಗುವಂತಾಗಿದೆ ಯಾರ ಸ್ಪರ್ಶಕ್ಕೆ ಈ ಹೂವು ಮನಸೋತಿತೋ ಯಾರು ಕಾರಣರು ಇದಕ್ಕೆಲ್ಲಾ? ಹುಣ್ಣಿಮೆಯ ರಾ...
-
ರವಿ ಜಾರಿದ ಕೆಲಸವಾಯ್ತೆಂದು ಲೋಕರೂಡಿ ಹಕ್ಕಿಗಳು ಗೂಡು ಸೇರಿದವು ಕತ್ತಲಾವರಿಸಿ,ನೀರವತೆ ಪಸರಿಸಿ ಪ್ರೇಮ ಹೃದಯಗಳಲ್ಲಿ ಪ್ರಣಯದ ಕಿಚ್ಚು ಹೊತ್ತಿಸಿ..... ಹೊನ್ನ ಚಂದ್ರಿಕೆಗ...
No comments:
Post a Comment