Friday, February 27, 2026

ಆಂತರಿಕ ಜಾಗೃತಿ

ಬೆಳಗಿನ ಶಾಂತ 'ಮೌನ' ನೀರವತೆಯಲ್ಲಿ,

ಮನದಲ್ಲಿ ಮೌನ 'ಚಿಂತನೆ' ತರಂಗಗಳು.

ಜೀವನದ 'ಉದ್ದೇಶ', ಜೀವನ ಜಂಜಾಟಗಳಲ್ಲಿ,

ಮೈ ಮರೆತಾಗ 'ಎಚ್ಚರಿಕೆ' ಪಿಸುಮಾತುಗಳು.

 

ನಾನು 'ಯಾರು'?, ಏಕೆ ಬಂದಿಹೆ?,

ಸಾವಿರ ಉತ್ತರವಿಲ್ಲದ 'ಪ್ರಶ್ನೆ'ಗಳು.

ಭಯ,ಆತಂಕ, ನಿಗೂಢತೆಯ 'ಕತ್ತಲು',

ಎಲ್ಲವೂ ಜಾರುವುದು 'ನೀ' ಎದ್ದು 'ನಿಂತರೆ'.

 

'ಮನೋಬಲ'ವಿಲ್ಲವೇ?, 'ಉದ್ದೇಶ' ದಾರಿತೋರುವುದು,

ಮನದ ಛಲ ದಾರಿ 'ದೀವಿಗೆ'ಯಾಗುವುದು.

ಮುಂದಿಟ್ಟ 'ಹೆಜ್ಜೆ'ಯನ್ನೆಂದೂ ಹಿಂದಿಡದಿರು,

ಆಗುವುದು ಆಗೇ ಹೋಗಲಿ, ಹೆಜ್ಜೆ 'ಮುಂದಿಡು'.

 

'ಬದಲಾವಣೆ' ಹರಿಕಾರ ಬರುವನೆಂದು ಕಾಯದಿರು,

ನೀನೇ ಬದಲಾವಣೆಯ 'ಹರಿಕಾರ ನಂಬಿಕೆ'ಯಿಡು.

ನಿನ್ನ ಜೀವನದ 'ಶಿಲ್ಪಿ ನೀನೇ', ಮರೆಯದಿರು,

'ಬೆಳವಣಿಗೆ'ಯೇ 'ಜೀವನ ಸಂತೋಷ' ಹಠತೊಡು.

No comments:

Post a Comment

ಮನೋರಥ- ಪುಸ್ತಕ

ಮನೋರಥದ ಕಡಲು ಪುಸ್ತಕ , ಶೂನ್ಯದಿಂದ ಅನಂತದೆಡೆಗೆ ಪಯಣ . ಉಲ್ಲಾಸದ ಲಹರಿ ಕವನ , ಕಲ್ಪನೆಯ ಸಾಗರದಿ ತೇಲಿಸುವ ಪ್ರೇರಣ , ಬಡವ , ಬಲ್ಲಿದನಿಗೂ ಸಾಕಾರ , ...